ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಮಗ ಸಾವು

6:28 PM, Wednesday, June 2nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Shaileshಪುತ್ತೂರು : ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಆಸ್ಟ್ರೇಲಿಯಾ ಉದ್ಯೋಗಿ, ಕೊರೋನದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ  ಘಟನೆ ಬುಧವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ಎಂಬಲ್ಲಿ ಈ ಘಟನೆ ನಡೆದಿದೆ.

ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ ಕೆಪಿಟಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿ(85) ಅವರು ಕೋವಿಡ್‌ನಿಂದ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಅವರ ಅಂತಿಮ ಸಂಸ್ಕಾರವು ಬುಧವಾರ ಬೈಲುಗುತ್ತು ಕೊಪ್ಪಳ ನಿವಾಸದಲ್ಲಿ ಕೋವಿಡ್ ನಿಯಮಾವಳಿ ಯೊಂದಿಗೆ ನಡೆಸಲಾಯಿತು. ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿದ್ದ ಭುಜಂಗ ಶೆಟ್ಟಿಯ ಕಿರಿಯ ಪುತ್ರ ಶೈಲೇಶ್ ಶೆಟ್ಟಿ (44) ಕುಸಿದು ಬಿದ್ದಿದ್ದು, ಅವರನ್ನು ತಕ್ಷಣವೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆ ತಲುಪುವ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.

Bhujangashettyಡಿಪ್ಲೋಮಾ ಇನ್ ಮೆಕಾನಿಕಲ್ ಪದವಿ ಮಾಡಿರುವ ಶೈಲೇಶ್ ಹಲವು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ಉನ್ನತ ಉದ್ಯೋಗದಲ್ಲಿದ್ದರು.

ಮೃತ ಶೈಲೇಶ್‌ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English