- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅನ್ ಲಾಕ್ ಆದರೆ ಬಸ್ ಸಂಚಾರ

vayuvyasarige [1]ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿತ್ತು. ಅದರಂತೆ ಬಸ್ ಸೇವೆಗಳನ್ನು ಸಹ ಸ್ಥಗಿತಗೊಳಿಸಿತ್ತು. ಈಗ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಸರ್ಕಾರ ಅನ್ ಲಾಕ್ ಮಾಡುವ ನಿರ್ಧಾರಕ್ಕೆ ಬಂದರೆ. ಬಸ್‌ಗಳ ಚಾಲನೆಯನ್ನು ಮಾಡುವುದಾದರೆ ಈಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗ ಯಾವ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣ ವಿಭಾಗದ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ಅವರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಜೂನ್ 7 ರ ವರೆಗೆ ಲಾಕ್ ಡೌನ್ ಇದ್ದು, ಸರ್ಕಾರ ಹೊಸದಾಗಿ ಮಾರ್ಗ ಸೂಚಿ ಅನುಗುಣವಾಗಿ, ಬಸ್‌ಗಳ ಸಂಚಾರಕ್ಕೆ ಅನುಮತಿ ಕೊಟ್ಟರೆ ಬಸ್ ನಿಲ್ದಾಣಗಳಿಗೆ, ಬಸ್‌ಗಳಿಗೆ ಸ್ಯಾನಿಟೇಜರ್ ಸಿಂಪಡಣೆ ಮಾಡಿಸಿ, ಚಾಲಕರು ಮತ್ತು ನಿರ್ವಾಹಕರಿಗೆ ಈಗಾಗಲೇ ವ್ಯಾಕ್ಸಿನ್ ಹಾಕಿಸಿದ್ದು, ಸರ್ಕಾರ ಅನುಮತಿ ಕೊಟ್ಟರೆ, ಎಲ್ಲ ರೀತಿಯ ವ್ಯವಸ್ಥೆ ಸಿದ್ಧವಾಗಿದೆ ಎಂದಿದ್ದಾರೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌, ಹುಬ್ಬಳ್ಳಿ ಬ್ಯುರೋ.