ಕುಂದಾಪುರ : ಕಾರು ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಪಂಚಾಯತ್ ಅಧ್ಯಕ್ಷ

1:44 PM, Sunday, June 6th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Udaya Ganiga
ಕುಂದಾಪುರ : ಗ್ರಾಮ ಪಂಚಾಯತ್ ಅಧ್ಯಕ್ಷ ನೊಬ್ಬ ದ್ವೇಷದಲ್ಲಿ ವ್ಯಕ್ತಿಯೊಬ್ಬರನ್ನು ತನ್ನ ಕಾರು ಢಿಕ್ಕಿ ಹೊಡೆಸಿ ಕೊಲೆಗೈದ  ಘಟನೆ ಶನಿವಾರ ರಾತ್ರಿ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಯನ್ನು ಹೊಸಬಾಳು ನಿವಾಸಿ ಉದಯ ಗಾಣಿಗ(40)  ಎಂದು ಗುರುತಿಸಲಾಗಿದೆ.

ತನ್ನ ಪತಿಯನ್ನು ಕೊಲೆ ಮಾಡಿರುವುದಾಗಿ  ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಳವೆ ಬಾವಿ ಪರವಾನಿಗೆ ವಿಚಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಇದೇ ದ್ವೇಷದಲ್ಲಿ ಪ್ರಾಣೇಶ್ ಯಡಿಯಾಳ ತನ್ನ ಕಾರನ್ನು ಚಲಾಯಿಸಿ ಉದಯ ಗಾಣಿಗ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಸಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Udaya Ganiga
ಗಂಭೀರವಾಗಿ ಗಾಯಗೊಂಡ ಉದಯ ಗಾಣಿಗ ಆಸ್ಪತ್ರೆಗೆ ಸಾಗಿ ಸುವ ದಾರಿ ಮಧ್ಯೆ ಮೃತಪಟ್ಟರು.

ಈ ವೇಳೆ ಆರೋಪಿ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದನು. ಬಳಿಕ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಇತರ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಉದಯ ಗಾಣಿಗ ಜಡ್ಕಲ್‌ನಲ್ಲಿ ಕೃಷಿ ಕೇಂದ್ರವನ್ನು ಹೊಂದಿದ್ದಾರೆನ್ನಲಾಗಿದೆ.

ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English