ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

4:00 PM, Sunday, June 6th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Sundaresh Babuಗದಗ : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಅವಕಾಶ ಕಲ್ಪಿಸಲಾಗಿದೆ: ಬೆ. 6 ರಿಂದ ಬೆ 10 ಗಂಟೆಯವರೆಗೆ ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು , ಆಹಾರ ಸಾಮಗ್ರಿ, ದಿನಸಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು, ಹಾಲಿನ ಬೂತ್, ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 6 ರಿಂದ 12 ಗಂಟೆಯವರೆಗೆ ರೈತರಿಗೆ ಅಗತ್ಯವಿರುವ ಬೀಜ,ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ಖರೀದಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ತಳ್ಳುಗಾಡಿ, ಆಟೋ, ಟಂಟಂಗಳಲ್ಲಿ ಬೀದಿ ಸುತ್ತುವ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ.

ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು, ಟ್ಯಾಕ್ಸಿ , ಅಟೋ , ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ:, ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ; ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಮಳಿಗೆಗಳು , ಪಾರ್ಸೆಲ್ ಹಾಗೂ ಹೋಂ ಡಿಲೆವರಿ ಸೇವೆ ಮಾತ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸಲಿವೆ; ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆಗೆ, ದೂರ ಸಂಪರ್ಕ, ಇಂಟರ್ ನೆಟ್ , ಪ್ರಸಾರ ಮತ್ತು ಕೆಬಲ್ ಸೇವೆಗಳು, ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ; (ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು) ; ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು; ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆ ಹಾಗೂ ರಸ್ತೆ ಕಾಮಗಾರಿ, ಅಗತ್ಯ ವಸ್ತುಗಳ ತಯಾರಿಕಾ ಘಟಕ; ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕ; ನ್ಯಾಯಬೆಲೆ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಗರಿಷ್ಟ 5 ಜನರಿಗೆ; ಮದುವೆ ಸಮಾರಂಭಗಳಲ್ಲಿ ಗರಿಷ್ಟ 40 ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಅವಕಾಶವಿಲ್ಲ: ಬಸ್ , ಮೆಟ್ರೋ ರೈಲು ಸಂಚಾರ , ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು , ಕ್ರೀಡಾಂಗಣ, ಈಜುಗೊಳ, ಉದ್ಯಾನವನಗಳು, ಮನರಂಜನಾ ಪಾರ್ಕ, ಕ್ಲಬ್ , ಥಿಯೇಟರ್ , ಬಾರ್ ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ. ಎಲ್ಲ ಸಾಮಾಜಿಕ , ರಾಜಕೀಯ , ಕ್ರೀಡೆ , ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ದಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳ ನಿಷೇಧ, ಎಲ್ಲ ಧಾರ್ಮಿಕ ಸ್ಥಳಗಳು / ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ; ಸಾರ್ವಜನಿಕರ ಓಡಾಟ ಕಡ್ಡಾಯವಾಗಿ ನಿಷೇಧ (ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ) ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು ಹಾಗೂ ಇತರ ಪ್ರಯಾಣಿಕ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

ಪ್ರತಿಬಂಧಕಾಜ್ಞೆ ಜಾರಿ: ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜೂನ 7 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ ಪ್ರತಿಬಂಧಕಾಜ್ಞೆಯನ್ನು ಜೂನ್ 14 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ವರದಿ: ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯುರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English