ಕೊರೋನ ಸೋಂಕು ಜೂನ್ 5 : ದಕ್ಷಿಣ ಕನ್ನಡ 609 – 5 ಸಾವು, ಉಡುಪಿ 494 – 2 ಸಾವು

10:18 PM, Sunday, June 6th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

corona ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 80,080ಕ್ಕೇರಿದೆ. 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 950ಕ್ಕೇರಿದೆ.

ಭಾನುವಾರ 862 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 71,580ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,550 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,71,018 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,90,951 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.

ಮಾಸ್ಕ್ ನಿಯಮ ಉಲ್ಲಂಘಿಸಿದ 61,585 ಮಂದಿಯಿಂದ 72,43,617 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 494 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇಂದು ಕೊರೋನಕ್ಕೆ ಇಬ್ಬರು ಮೃತಪಟ್ಟಿದ್ದು, ಈವರೆಗೆ ಬಲಿಯಾದವರ ಸಂಖ್ಯೆ 344ಕ್ಕೇರಿದೆ. ದಿನದಲ್ಲಿ 494 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 4321 ಆಗಿದೆ.

ಉಡುಪಿಯ 73 ವರ್ಷ ಪ್ರಾಯದ ಹಿರಿಯ ನಾಗರಿಕರು ಹಾಗೂ 38 ವರ್ಷ ಪ್ರಾಯದ ಯುವಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಕೊರೋನ ಲಕ್ಷಣದೊಂದಿಗೆ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾಕ್ಕಾಗಿ ಜೂ.2ರಂದು ಚಿಕಿತ್ಸೆಗೆ ದಾಖಲಾದ ಯುವಕ ನಿನ್ನೆ ಮೃತಪಟ್ಟಿದ್ದಾರೆ. ಹಿರಿಯನಾಗರಿಕರು ಇದರೊಂದಿಗೆ ಹೃದಯ ಸಮಸ್ಯೆ ಹಾಗೂ ಇತರ ತೊಂದರೆಗಳಿಂದ ಬಳಲುತಿದ್ದು, ಬಂದ 24 ಗಂಟೆಗಳಲ್ಲಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,13,248 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 423 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 536 ಮಂದಿ ಗುಣಮುಖರಾಗಿದ್ದಾರೆ

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English