- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ ಉದಾಸಿ ನಿಧನ

CM Udasi [1]ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ (81 )ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು. ಸಿ.ಎಂ ಉದಾಸಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಆರು ಬಾರಿ ಶಾಸಕರಾಗಿ ಗೆದ್ದಿದ್ದ ಉದಾಸಿ 2013 ಮತ್ತು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

ನಾಳೆ ಹಾವೇರಿಯ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ.

ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.