- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಸಿವಿಲ್ ಎಂಜಿನಿಯರ್, ಮನನೊಂದ ಪತ್ನಿ ಆತ್ಮಹತ್ಯೆ

rachitha [1]ಕಲಬುರಗಿ : ಎರಡೂವರೆ ವರ್ಷದ ಹಿಂದೆ  ಮದುವೆಯಾಗಿದ್ದ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು 21 ವರ್ಷದ ರಚಿತಾ ಎಂದು ಗುರುತಿಸಲಾಗಿದೆ.

ರಚಿತಾ ಅವರಿಗೆ  ಕಳೆದ ಎರಡೂವರೆ ವರ್ಷದ ಹಿಂದೆ ವೀರಣ್ಣ ಎಂಬವರ ಜೊತೆ ಮದುವೆಯಾಗಿತ್ತು. ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ವೀರಣ್ಣ, ಮದುವೆಯಾದ ಬಳಿಕ ಹಣಕ್ಕಾಗಿ ಪತ್ನಿಯನ್ನು ಪೀಡಿಸಿ ತೊಂದರೆ ಕೊಡ್ತಿದ್ದ ಎಂದು ಹೇಳಲಾಗಿದೆ.

ಮಂಗಳವಾರ  ತವರು ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಗಲಾಟೆ ತೆಗೆದಿದ್ದಾನೆ. ಇದರಿಂದ ನೊಂದ ರಚಿತಾ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವೀರಣ್ಣ, ಮಾವ ಚಂದ್ರಕಾಂತ್, ಅತ್ತೆ ಲಕ್ಷ್ಮಿಬಾಯಿ, ಮೈದುನ್ ಪವನ್ ಅವರನ್ನು ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.