ನಾನು ಸಿಎಂ ರೇಸಲ್ಲಿಲ್ಲ, ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ : ಶಾಸಕ ಅರವಿಂದ ಬೆಲ್ಲದ

11:53 AM, Saturday, June 12th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

Aravinda Belladaಧಾರವಾಡ : ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ, ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿ ಒಂದೇ ಸಹಿ ಸಂಗ್ರಹ ನಡೆದಿತ್ತು. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.

ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ. ಒಂದೇ ಸಹಿ ಸಂಗ್ರಹ ನಡೆದಿತ್ತು. ಅದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದು ಮಾತ್ರ ಎಂದಿದ್ದಾರೆ.

ನಮ್ಮದು ಶಿಸ್ತಿನ ಪಕ್ಷವಾಗಿದ್ದು ಪಕ್ಷದ ಶಾಸಕಾಂಗ ಸಭೆಯಲ್ಲೇ ಏನೇ ಇದ್ದರೂ ಚರ್ಚೆ ನಡೆಯುತ್ತದೆ. , ಇಲ್ಲಿ ಸಹಿ ಸಂಗ್ರಹಕ್ಕೆ ಅವಕಾಶ ಇಲ್ಲ. ಹಾಗೆ ಮಾಡಿದವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ.  ಗ್ರಾಮೀಣದ ರಸ್ತೆ, ಗ್ರಾಮಿಣ ಭಾಗಕ್ಕೆ ಸಂಬಂಧಿಸಿದ ಶಾಸಕರ ಸಹಿ ಅದು ಎಂದು ಉತ್ತರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English