- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಾನು ಸಿಎಂ ರೇಸಲ್ಲಿಲ್ಲ, ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ : ಶಾಸಕ ಅರವಿಂದ ಬೆಲ್ಲದ

Aravinda Bellada [1]ಧಾರವಾಡ : ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ, ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿ ಒಂದೇ ಸಹಿ ಸಂಗ್ರಹ ನಡೆದಿತ್ತು. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.

ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ. ಒಂದೇ ಸಹಿ ಸಂಗ್ರಹ ನಡೆದಿತ್ತು. ಅದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದು ಮಾತ್ರ ಎಂದಿದ್ದಾರೆ.

ನಮ್ಮದು ಶಿಸ್ತಿನ ಪಕ್ಷವಾಗಿದ್ದು ಪಕ್ಷದ ಶಾಸಕಾಂಗ ಸಭೆಯಲ್ಲೇ ಏನೇ ಇದ್ದರೂ ಚರ್ಚೆ ನಡೆಯುತ್ತದೆ. , ಇಲ್ಲಿ ಸಹಿ ಸಂಗ್ರಹಕ್ಕೆ ಅವಕಾಶ ಇಲ್ಲ. ಹಾಗೆ ಮಾಡಿದವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ.  ಗ್ರಾಮೀಣದ ರಸ್ತೆ, ಗ್ರಾಮಿಣ ಭಾಗಕ್ಕೆ ಸಂಬಂಧಿಸಿದ ಶಾಸಕರ ಸಹಿ ಅದು ಎಂದು ಉತ್ತರಿಸಿದರು.