[1]ತುಮಕೂರು : ಜಿಲ್ಲೆಯ ಎರಡು ಗ್ರಾಮಗಳಲ್ಲಿ ಮಹಾಮಾರಿ ಕೊರೊನಾ ಓಡಿಸಲು ಜನರು ದೇವರ ಮೊರೆ ಹೋಗಿದ್ದಾರೆ. ಮರದಲ್ಲಿ ರಾಗಿ ಮುದ್ದೆ, ಬೇವಿನ ಸೊಪ್ಪು ಇಟ್ಟು, ಮಾರಮ್ಮನ ದೇವಾಲಯದ ಪ್ರದಕ್ಷಿಣೆ ಹಾಕಿ ಪೂಜೆ ಮಾಡಿದ್ದಾರೆ. ಪರಿಣಾಮ ಈಗ 20 ಜನ ಗುಣಮುಖರಾಗಿ ವಾಪಸ್ಸಾಗಿದ್ದಾರೆ ಎಂಬುವುದು ಗ್ರಾಮಸ್ಥರ ನಂಬಿಕೆ.
ಪಕ್ಕದ ಗ್ರಾಮ ತಿಪ್ಪಗಾನಹಳ್ಳಿಯಲ್ಲಿ ಇದೇ ರೀತಿ ಆಚರಿಸಿದ್ದಾರೆಂದು ಪಾವಗಡ ತಾಲೂಕಿನ ಬಲ್ಲೇನಹಳ್ಳಿಯಲ್ಲಿ ಮಾರಮ್ಮ ದೇವಿ ಹಾಗೂ ರಕ್ಷಾ ಕಲ್ಲಿಗೆ ಪೂಜೆ ಸಲ್ಲಿಸಿ ಜನರು ಕೊರೊನಾ ದೂರ ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.
ಪುರುಷರು ಮಾತ್ರ ಈ ಪೂಜೆಯಲ್ಲಿ ಪಾಲ್ಗೊಂಡಿದ್ದು ಮೊದಲು ಗ್ರಾಮ ದೇವರಿಗೆ ನಂತರ ರಕ್ಷಾ ಕಲ್ಲಿಗೆ ಎಡೆ ಇಟ್ಟು ಪೂಜೆ ಮಾಡಿದ್ದಾರೆ.
ಬಲ್ಲೇನಹಳ್ಳಿ ಗ್ರಾಮದಲ್ಲಿ ಸುಮಾರು 20 ಜನ ಕೊರೊನಾ ಸೋಂಕಿತರು ಇದ್ದರು. ಹಾಗಾಗಿ ಗ್ರಾಮಸ್ಥರು ಪೂಜೆ ಮಾಡಿ ನಮ್ಮವರಿಗೆ ಬಂದ ಕೊರೊನಾ ದೂರವಾಗಲಿ ಎಂದು ಪ್ರಾರ್ಥಿಸಿದ್ದರು.