[1]ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 618 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.92 ಇದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 83,311ಕ್ಕೇರಿದೆ.
ಶನಿವಾರ 4 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 976ಕ್ಕೇರಿದೆ. ಶನಿವಾರ 524 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 75,273ಕ್ಕೇರಿದೆ.
ಜಿಲ್ಲೆಯಲ್ಲಿ 7,062 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರಗೆ 8,92,095 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,08,784 ಮಂದಿಯ ವರದಿ ನೆಗೆಟಿವ್ ಬಂದಿದೆ.
ಮಾಸ್ಕ್ ನಿಯಮ ಉಲ್ಲಂಘಿಸಿದ 63,140 ಮಂದಿಯಿಂದ 74,09,617 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿತರ ಸಂಖ್ಯೆ 258ಕ್ಕೇರಿದೆ. ಇಬ್ಬರು ಮೃತಪಟ್ಟಿದ್ದಾರೆ, 625 ಮಂದಿ ಚಿಕಿತ್ಸೆಯಿಂದ ಗುಣಮುಖ ರಾಗಿದ್ದಾರೆ. ಸದ್ಯ 3348 ಮಂದಿ ಸಕ್ರಿಯ ಸೋಂಕಿತರಿದ್ದಾರೆ .
ಶನಿವಾರ ಕುಂದಾಪುರ ತಾಲೂಕಿನ 43ರ ಹರೆಯದ ಮಹಿಳೆ ಹಾಗೂ ಉಡುಪಿಯ 68ರ ಹರೆಯದ ವೃದ್ಧೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 356ಕ್ಕೇರಿದೆ.
ಶುಕ್ರವಾರ ಪಾಸಿಟಿವ್ ಬಂದ 258 ಮಂದಿಯಲ್ಲಿ 136 ಮಂದಿ ಪುರುಷರು ಹಾಗೂ 122 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 133, ಕುಂದಾಪುರ ತಾಲೂಕಿನ 75 ಹಾಗೂ ಕಾರ್ಕಳ ತಾಲೂಕಿನ 47 ಮಂದಿ ಇದ್ದು, ಮೂವರು ಹೊರಜಿಲ್ಲೆಯಿಂದ ಚಿಕಿತ್ಸೆಗೆಂದು ಬಂದವರು. ಇವರಲ್ಲಿ 13 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 245 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,33,103 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಶುಕ್ರವಾರ ಒಟ್ಟು 625 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 60,350ಕ್ಕೇರಿದೆ. ಶುಕ್ರವಾರ ಜಿಲ್ಲೆಯ 3404 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 64,054 ಆಗಿದೆ
ಜಿಲ್ಲೆಯಲ್ಲಿ ಇಂದು ದಾವಣಗೆರೆಯ 55ರ ಹರೆಯದ ವ್ಯಕ್ತಿ ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗಾಗಿ ಇಂದು ಮಣಿಪಾಲ ಕೆಎಂಸಿಗೆ ದಾಖಲಾಗಿದ್ದಾರೆ. ಈ ಮೂಲಕ ಕೆಎಂಸಿಯಲ್ಲಿ ಹೊರಜಿಲ್ಲೆಯ ಮೂವರು ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
ಕಾಸರಗೋಡು ಜಿಲ್ಲೆ
ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 475 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 375 ಮಂದಿಗೆ ಕೊರೊನಾ ನೆಗೆಟಿವ್ ಪತ್ತೆಯಾಗಿದೆ.