[1]ಮಂಗಳೂರು : ತುಳು ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಸೂರ್ಯ ಎನ್ ಕೆ. ಬೆಂಗಳೂರಿನ ಶ್ರೀ ರಾಂಪುರ ನಿವಾಸಿ ಎನ್ನಲಾಗಿದೆ
ಆರೋಪಿ ಸೂರ್ಯ ಎನ್ ಕೆ.ಪಾದರಕ್ಷೆಯಲ್ಲಿ ತುಳುನಾಡಿನ ಧ್ವಜದ ಚಿತ್ರ ಬಿಡಿಸಿ ತುಳುಭಾಷೆಗೆ ತುಳುನಾಡಿಗೆ ಅವಮಾನ ಎಸಗಿದ್ದ. ಚಪ್ಪಲಿಯಲ್ಲಿ ತುಳು ಧ್ವಜ ಬಳಸಿ ಎಡಿಟ್ ಮಾಡಿದ್ದ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸೂರ್ಯ ಎಂಬ ಹೆಸರಿನಲ್ಲಿ ಪೋಸ್ಟ್ ಮಾಡಿದ್ದ. ಈತ ತನ್ನ ಫೇಸ್ ಬುಕ್ ಪೋಸ್ಟ್ ನಲ್ಲಿ ಈಗ ತುಳುನಾಡು ಚಪ್ಪಲ್ ಬಂದಿದೆ. ಮುಂದೆ ಬಿಕಿನಿಯು ಬರಬಹುದು ಎಂದಿದ್ದ
[2]ಆ ಮೂಲಕ ತುಳು ಭಾಷೆಗೆ ಅವಮಾನ ಮಾಡಿದ್ದ. ಇದರ ವಿರುದ್ಧ ತುಳುನಾಡಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಆರೋಪಿಯನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಜರಗಿಸುವಂತೆ ಒತ್ತಾಯಿಸಲಾಗಿತ್ತು. ಇದೀಗ ಆರೋಪಿಯನ್ನು ಬೆಂಗಳೂರಿನಿಂದ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೋರೇಟರ್ ಶಶಿಧರ್ ಹೆಗ್ಡೆ ಅವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು.