ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸಿದ ಶೋಭಾ ಕರಂದ್ಲಾಜೆ : ತುಳುವೆರೆ ಪಕ್ಷ ಖಂಡನೆ

7:43 PM, Tuesday, June 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Shailesh ಬೆಳ್ತಂಗಡಿ: ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಇತ್ತೀಚೆಗೆ ತುಳು ರಾಜ್ಯದ ಬೇಡಿಕೆಯು ಕುಚೋದ್ಯದ ಬೇಡಿಕೆ ಎಂದಿದ್ದು ಖಂಡನೀಯ. ಕನ್ನಡ ಏಕೀಕರಣ ಚಳವಳಿಯನ್ನು ಸಮರ್ಥಿಸಿರುವ ಇವರು ಅದೇ ತುಳು ಏಕೀಕರಣ ಚಳವಳಿಯನ್ನು ಕುಚೋದ್ಯದ ಬೇಡಿಕೆ ಎಂದಿದ್ದು ಇವರ ದ್ವಿಮುಖ ನೀತಿಯನ್ನು ತೋರಿಸುತ್ತದೆ. ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸುವ ಮೂಲಕ ಸಮಸ್ತ ತುಳುವರ ಭಾವನೆಗಳಿಗೆ ನೋವು ತಂದಿದ್ದಾರೆ.

ತುಳು ಅಸ್ಮಿತೆಯ ವಿಚಾರಗಳನ್ನು ಯಾರೇ ಕುಚೋದ್ಯ ಮಾಡಿದರೂ ಅದನ್ನು ತುಳುವೆರೆ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ಅದ್ಯಕ್ಷರಾದ ಶೈಲೇಶ್ ಆರ್.ಜೆ. ಮತ್ತು ಬೆಳ್ತಂಗಡಿ ತಾಲೂಕು ಘಟಕದ ಅದ್ಯಕ್ಷರಾದ ಪ್ರಶಾಂತ್ ಎಮ್. ಇವರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English