ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಸಂಸ್ಮರಣೆ

6:41 PM, Wednesday, June 23rd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Balidan-diwas ಮಂಗಳೂರು : ಜನ ಸಂಘದ ಸಂಸ್ಥಾಪಕ ರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಇಂದು ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು.

ಮೂಡ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ ಬೌದ್ಧಿಕ ಮಂಡಿಸಿದರು.ಪೂರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಅಜಯ್ ಕುಲಶೇಖರ ಅವರು ವೃಕ್ಷಾರೋಹಣ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಮನಪಾ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮ ನ ಪಾ ಮುಖ್ಯ ಸಚೇತಕರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಕೋಶಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ಶೇಟ್ ಮಂಡಲ ಪದಾಧಿಕಾರಿಗಳು ,ಮ ನ ಪಾ ಸದಸ್ಯರು , ಮಹಾಶಕ್ತಿ ಕೇಂದ್ರ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ವಿವಿಧ ಮೋರ್ಚಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಾಮಾಜಿಕ ಜಾಲ ತಾಣ ಪ್ರಕೋಷ್ಠದ ಸಂಚಾಲಕರು ಹಾಗೂ ಸಹಸಂಚಾಲಕರು ಉಪಸ್ಥಿತರಿದ್ದರು.

ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು ಸ್ವಾಗತವನ್ನು ಬಯಸಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಂದ್ರ ಜೆ ವಂದಿಸಿದರು ಇದೆ ಸಮಯದಲ್ಲಿ ಮಂಡಲ ಅಧ್ಯಕ್ಷರಾದ  ವಿಜಯ್ ಕುಮಾರ್ ಶೆಟ್ಟಿ ಹಾಗೂ ಶಾಸಕರಾದ ವೇದವ್ಯಾಸ ಕಾಮತ ಅವರ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವು ನಡೆಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English