- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಕೆ.ಎಸ್.ಈಶ್ವರಪ್ಪ

Tunga Dam [1]ಶಿವಮೊಗ್ಗ: ತುಂಗಾ ನದಿಯು ಶಾಂತ ರೀತಿಯಲ್ಲಿ ಹರಿಯಲು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ.

ಈ ಬಾರಿ ಉತ್ತಮ ಮಳೆಯಾದ್ದರಿಂದ ತುಂಗಾ ಜಲಾಶಯ ಕಳೆದ ತಿಂಗಳೇ ಭರ್ತಿಯಾಗಿತ್ತು. ಈ ಜಲಾಶಯ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಆಧಾರವಾಗಿದೆ.

ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಈಶ್ವರಪ್ಪ ಬಾಗಿನ ಸಮರ್ಪಿಸಿ, ಜಲಾಶಯದ ಬಳಿ ತುಂಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

Tunga Dam [2]