ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಹ ವೈರಲ್

2:16 PM, Friday, June 25th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

siddaramaiahಗದಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ಅಭಿಮಾನ ತೋರಿಸಿದ್ದಾರೆ.

ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕ್ಯಾಂಪೇನ್ ಮಾಡಿ ಗಮನ ಸೆಳೆದಿದ್ದಾರೆ.

ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನ ಕರಿ ಹರಿಯುವ ಸಂಪ್ರದಾಯಕ್ಕೆ ತಕ್ಕಂತೆ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ  ಎಂದು ಬರೆದು  ಗಮನ ಸೆಳೆಯಲಾಗಿತ್ತು. ಸಿಎಂ ಕ್ಯಾಪೇನ್‍ನ ಎತ್ತಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English