ಮರಕಡ ವಾರ್ಡಿನಲ್ಲಿ ಕೃಷಿ ಸಚಿವರಿಂದ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನಕ್ಕೆ ಚಾಲನೆ

6:43 PM, Friday, June 25th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

BC-Patilಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕುಂಜತ್ತಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಇವರ ಹಡೀಲು ಬಿಟ್ಟ ಜಮೀನಿನಲ್ಲಿ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ರಾಜ್ಯದ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಯಾಂತ್ರೀಕೃತ ಭತ್ತದ ಕೃಷಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಭಾಜಪಾ ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಉಪಮೇಯರ್ ಸುಮಂಗಲಾ ರಾವ್,ಸ್ಥಳೀಯ ಕಾರ್ಪೊರೇಟರ್ ಲೋಹಿತ್ ಅಮೀನ್,ಕಿರಣ್ ಕೋಡಿಕಲ್, ಕೃಷಿ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English