ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಮೂವರು ಸ್ಪರ್ಧಿಗಳಿದ್ದಾರೆ : ಸಚಿವ ಬಿ.ಸಿ ಪಾಟೀಲ್

8:20 PM, Saturday, June 26th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

bc Pateelಉಡುಪಿ: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಗಾದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಇದ್ದಾರೆ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ಸಿನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಮಾತ್ರ ಸಿಎಂ ಸ್ಪರ್ಧಿಗಳಲ್ಲ. ಜಿ. ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್. ದಲಿತ ಸಿಎಂ ಆಗಬೇಕು ಎಂದು ಪರಮೇಶ್ವರ್ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ ಎಲ್ಲರೂ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ತಪ್ಪಲ್ಲ, ಕೂಸು ಹುಟ್ಟುವ ಮೊದಲು ತೊಟ್ಟಿಲು ಕಟ್ಟಿ ತೂಗಿದ್ರೆ ಹೇಗೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಕಥೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಯ್ತು. ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಂದಿನ ಸಿಎಂ ಚರ್ಚೆ ನಡೆಯುತ್ತಿದೆ ಎಂದು ಸಚಿವ ಬಿಸಿ ಪಾಟೀಲ್ ಪ್ರಶ್ನಿಸಿದ್ದಾರೆ.

ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಇವರು ಈಗಲೇ ಕುರ್ಚಿಗೆ ಕಿತ್ತಾಡುತ್ತಿದ್ದಾರೆ ಎಂದರೆ ಜನ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಹಡಿಲು ಭೂಮಿಯನ್ನು ಹಿಡಿದುಕೊಂಡು ಕನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು. ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬಿ.ಸಿ ಪಾಟೀಲ್ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English