ಕೋಳಿ ಇನ್ನಿತರ ವಸ್ತು ಇಟ್ಟು ರಸ್ತೆ ಮಧ್ಯೆಯೇ ವಾಮಾಚಾರ – ಭಯಭೀತರಾದ ಜನ

8:43 PM, Saturday, June 26th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

black magicಚಿಕ್ಕಮಗಳೂರು: ಕೋಳಿ, ನಿಂಬೆಹಣ್ಣು, ಮೊಟ್ಟೆ, ಹೊಸ ಬಟ್ಟೆ, ಅನ್ನ, ತೆಂಗಿನಕಾಯಿ, ಅರಿಶಿನ-ಕುಂಕುಮ, ಮೂರು ತರದ ದಾರ, ಬಳೆ, ತಲೆಗೂದಲು ಇಟ್ಟು ರಸ್ತೆ ಮಧ್ಯೆಯೇ ವಾಮಾಚಾರ ಮಾಡಿರುವ ಘಟನೆ  ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ರಂಗನೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಂಗೇನಹಳ್ಳಿ ಗ್ರಾಮದಿಂದ ಬರಗೇನಹಳ್ಳಿಗೆ ಹೋಗುವ ಮಾರ್ಗ ಮಧ್ಯೆ ಈ ವಾಮಾಚಾರ ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆಯೇ ಕೃಷಿ ಕೆಲಸಕ್ಕೆ ಜಮೀನಿಗೆ ಹೋಗುವ ರೈತರು ಇದನ್ನ ಕಂಡು ಕಂಗಾಲಾಗಿದ್ದಾರೆ. ವಾಮಾಚಾರ ನಡೆಸಿದ ದುಷ್ಕರ್ಮಿಗಳು ವಾಮಾಚಾರದ ಬಳಿಕ ವಿವಿಧ ವಸ್ತುಗಳು ಸ್ಥಳದಲ್ಲಿ ಬಿಟ್ಟು ಹೋಗಿದ್ದಾರೆ.

ನೇರ ರಸ್ತೆಯಲ್ಲಿ ಈ ರೀತಿ ಕೆಟ್ಟದ್ದಾಗಿ ವಾಮಾಚಾರ ಮಾಡಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ವಾಮಾಚಾರ ನಡೆಸುವವರು ಸಾಮಾನ್ಯವಾಗಿ ಮೂರು ದಾರಿ ಕೂಡಿರುವ ಕಡೆ ವಾಮಾಚಾರ ನಡೆಸುತ್ತಾರೆ ಎಂದು ಹಳ್ಳಿಗರು ಹೇಳಿದ್ದಾರೆ.

ಈ ರಸ್ತೆಯಲ್ಲಿ ಬರಗೇನಹಳ್ಳಿ, ರಂಗೇನಹಳ್ಳಿ, ಅರುವನಹಳ್ಳಿ, ಗೌಳಿಗರ ಕ್ಯಾಂಪ್ ಸೇರಿದಂತೆ ಏಳೆಂಟು ಗ್ರಾಮದ ಜನ ದಿನಂ ಪ್ರತಿ ಓಡಾಡುತ್ತಾರೆ. ಸಾಲದಕ್ಕೆ ಕೃಷಿ ಕೆಲಸಕ್ಕೂ ನೂರಾರು ರೈತರು ಓಡಾಡುತ್ತಾರೆ. ಇಂತಹಾ ಜನವಸತಿ ಪ್ರದೇಶದಲ್ಲಿ ಹೀಗೆ ವಾಮಾಚಾರ ಮಾಡಿರುವುದರಿಂದ ಸ್ಥಳೀಯರು ಕೂಡ ಭಯಭೀತರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English