ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ

7:12 PM, Monday, June 28th, 2021
Share
1 Star2 Stars3 Stars4 Stars5 Stars
(No Ratings Yet)
Loading...

Mahadevapura ಬೆಂಗಳೂರು  : ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬೆಳ್ಳಂದೂರು ಟ್ರಿನಿಟಿ ಮೆಡೋಸ್ ಹತ್ತಿರ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಚಾಲನೆ ಅವರು ನಂತರ ಎ. ಇ. ಸಿ. ಎಸ್ ಬಡಾವಣೆ ಯಲ್ಲಿ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಹದೇವಪುರ ಕ್ಷೇತ್ರದ ಬೆಳತ್ತೂರು ಅಯ್ಯಪ್ಪಸ್ವಾಮಿ ದೇವಸ್ಥಾನದ ಹತ್ತಿರ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ. ಕಾಮಗಾರಿಗೆ ಚಾಲನೆ ನೀಡಿದರು.

Mahadevapura ಇದೇ ಸಂದರ್ಭದಲ್ಲಿ ಮಹದೇವಪುರ ಕ್ಷೇತ್ರದ ಪಣತ್ತೂರುನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳ ಸೇತುವೆ (RUB) ಕಾಮಗಾರಿಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ ನೀಡಿದರು. ಅಲ್ಲದೆ, ಮಹದೇವಪುರ ಕ್ಷೇತ್ರದ ಬೆಳತ್ತೂರು ಕಾಲೋನಿಯಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಾಣವಾಗಿರುವ ಶುದ್ಧ ನೀರಿನ ಘಟಕದ ಉದ್ಘಾಟನೆ ನೆರವೇರಿಸಿದರು.

ನಂತರ ಮಹದೇವಪುರ ಕ್ಷೇತ್ರದ ಕೈಕೊಂಡ್ರಹಳ್ಳಿಯಲ್ಲಿ ಲಾಕ್ ಡೌನ್ ಸಂಕಷ್ಟಕ್ಕೆ ಒಳಗಾದ ಬಡವರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ದಿನಸಿ ಕಿಟ್ ವಿತರಿಸಿದರು. ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Mahadevapura

Mahadevapura

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English