- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದ ಮಾಜಿ ‌ಸಚಿವ ಅಭಯಚಂದ್ರ ಜೈನ್

Abhyachandra Jain [1]ಮಂಗಳೂರು : ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ‌ಸಚಿವ ಅಭಯಚಂದ್ರ ಜೈನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ನನಗಿನ್ನು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಗೆಲ್ಲಬೇಕೆಂದರೆ ಯುವಕರಿಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ನಮ್ಮ ರಾಜಕಾರಣಿಗಳು ಇದನ್ನು ಮರೆತಿರುವುದರಿಂದಲೇ ಕಾಂಗ್ರೆಸ್ಗೆ ಭಾರೀ ಏಟು ಬಿದ್ದಿದೆ. ಆದ್ದರಿಂದ ದೇಶದಲ್ಲಿ ಕಾಂಗ್ರೆಸ್ ಉಳಿಯಬೇಕಾದರೆ ನಾವು ಈ ರೀತಿಯ ಪ್ರಯತ್ನ ಮಾಡಬೇಕು ಎಂದರು.

ನಾನು, ಸೊರಕೆ ಹಾಗೂ ರಮಾನಾಥ್‌ ರೈ ಅವರು 35-40 ನೇ ವಯಸ್ಸಿನಲ್ಲಿ ಶಾಸಕರಾಗಿದ್ದವು. ಈಗ ಯುವಕರಿಗೆ ಶಾಸಕರಾಗಲು ಅವಕಾಶವಿದೆ. ಕಾಂಗ್ರೆಸ್‌ ಅದೇ ಹಳೆ ಮುಖಕ್ಕೆ ಆದ್ಯತೆ ನೀಡುತ್ತದೆ ಎಂದು ಹಲವರು ಅದೇ ಮನಸ್ಥಿತಿಯಲ್ಲಿದ್ದಾರೆ. ಹಾಗಾಗಿ ಯುವಕರಿಗೆ ಅವಕಾಶ ನೀಡಿ. ಪಕ್ಷ ಮತ್ತಷ್ಟು ಬಲಗೊಳ್ಳುತ್ತದೆ ಎಂದಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ ಆದಷ್ಟು ಯುವಕರಿಗೆ ಆದ್ಯತೆ ನೀಡಿ, ಕಳೆದ ಚುನಾವಣೆಯಲ್ಲಿ ದ.ಕ ಜಿಲ್ಲೆಯಲ್ಲಿ ಬಿಜೆಪಿಗರು ಯುವಕರಿಗೆ ಸ್ಥಾನ ನೀಡಿರುವುದರಿಂದ ಹೆಚ್ಚಿನ ಕಡೆಗಳಲ್ಲಿ ಗೆಲ್ಲಲು ಸಾಧ್ಯವಾಯಿತು. ಆದ್ದರಿಂದ ಯುವಕರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭಯಚಂದ್ರ ಜೈನ್ ಹೇಳಿದರು.