ಮುಂದಿನ ಚುನಾವಣೆಯಲ್ಲಿ ಎಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ – ವಿನಯ್ ಗುರೂಜಿ ಭವಿಷ್ಯ

6:50 PM, Saturday, July 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

vinaya Gurujiಬೆಂಗಳೂರು : ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು, ಎಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ, ಅಲ್ಲದೇ, ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದ್ದು, ಅವರು ಶಾಸಕರಾಗುತ್ತಾರೆ ಎಂದಿದ್ದಾರೆ.

ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿ ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಭೇಟಿ ನೀಡಿ ಗುರೂಜಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಎಂದು ತಿಳಿಸಿದ್ದಾರೆ.

ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ, ಚಿಕ್ಕವಯಸ್ಸಾದರೂ ಅವರು ಹೇಳುವ ಮಾತುಗಳೆಲ್ಲಾ ಸತ್ಯವಾಗಿದೆ ಎಂಬುದನ್ನು ಅನೇಕರು ಈಗಾಗಲೇ ನಂಬಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಅವರ ಮಾರ್ಗದರ್ಶನ ಪಡೆಯುತ್ತಾರೆ.

ಗುರೂಜಿ ಭವಿಷ್ಯ  2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ, ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ  ಎಂಬುದು ನಿಜವಾಗಿತ್ತು. ಇದೇ ಹಿನ್ನಲೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ಕೂಡ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಅವರು ಆಶೀರ್ವಾದ ಪಡೆದು ಸತ್ಕರಿಸಿದ್ದರು.

ಬಿಜೆಪಿ ಭ್ರಷ್ಟಚಾರಕ್ಕೆ ಜನರು ರೋಸಿ ಹೋಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದ್ದೇವೆ ಎಂದು ಈಗಾಗಲೇ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇನ್ನು ಮಂಡ್ಯದಲ್ಲಿ ಸೋಲನ್ನು ಅನುಭವಿಸಿದ್ದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ರಾಮನಗರದಲ್ಲಿ ಸಕ್ರಿಯರಾಗಿದ್ದು, ಅಲ್ಲಿಂದಲೇ ಮುಂದಿನ ವಿಧಾಸಭಾ ಚುನಾವಣೆ ವೇಳೆ ಕಣಕ್ಕೆ ಇಳಿಯಲು  ವೇದಿಕೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English