ಎಚ್ ಡಿ ಕುಮಾರಸ್ವಾಮಿ ಅವರ ಮಾದ್ಯಮ ಸಲಹೆಗಾರ ಕೆ.ಸಿ. ಸದಾನಂದ ನಿಧನ

11:21 AM, Tuesday, July 6th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

KC Sadanandaಬೆಂಗಳೂರು  : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾದ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸೋಮವಾರ ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.

ಎಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English