ಗಂಭೀರ ಗಾಯಗೊಂಡಿದ್ದ ಛಾಯಾಗ್ರಾಹಕ ಆಸ್ಪತ್ರೆಯಲ್ಲಿ ಸಾವು

4:07 PM, Tuesday, July 6th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Ashok Shettyಕುಂದಾಪುರ : ದಾವಣಗೆರೆಯಲ್ಲಿ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರದ ಛಾಯಾಗ್ರಾಹಕ ಗಂಭೀರ ಗಾಯಗೊಂಡಿದ್ದು, ಇಂದು ಬೆಳ್ಳಗ್ಗೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟವರನ್ನು ಕುಂದಾಪುರದ ಹಿರಿಯ ಛಾಯಾಚಿತ್ರಗಾರ, ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕರ ಸಂಘಟನೆಯ ಮಾಜೀ ಅಧ್ಯಕ್ಷ, ಹಾಲೀ ಸಂಚಾಲಕ ಹೇರೂರು ಅಶೋಕ ಕುಮಾರ್ ಶೆಟ್ಟಿ(58) ಎಂದು ಗುರುತಿಸಲಾಗಿದೆ.

ನಾವುಂದದಲ್ಲಿ ಮಾನಸ ಸ್ಟುಡಿಯೋ ಮಾಲಕರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಮಗ ಪನ್ನಗ ಹಾಗೂ ಕುಮಾರ್ ಎಂಬುವರ ಜೊತೆಗೆ ತನ್ನ ಕಿಯಾ ಸೊನೆಟ್ ಕಾರಿನಲ್ಲಿ ಹೋಗಿದ್ದು, ಭಾನುವಾರ ಕಾರ್ಯಕ್ರಮ ಮುಗಿಸಿ ರಾತ್ರಿ ವಾಪಾಸ್ಸಾಗುತ್ತಿದ್ದರು. ಅಶೋಕ್ ಕುಮಾರ್ ಶೆಟ್ಟಿ ಪುತ್ರ ಪನ್ನಗ ಕಾರು ಚಲಾಯಿಸುತ್ತಿದ್ದರು. ಮುಂಜಾನೆ 3 ಗಂಟೆ ಸುಮಾರಿಗೆ ಎದುರಿನಿಂದ ಹೋಗುತ್ತಿದ್ದ ಕಂಟೈನರ್ ಲಾರಿಗೆ ಡಿಕಿ ಹೊಡೆದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿ ಇಬ್ಬರು ಕೂಡ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English