ಲಾರಿ- ಬೈಕ್ ಮುಖಾಮುಖಿ ಢಿಕ್ಕಿ ಬ್ಯಾಂಕ್ ಉದ್ಯೋಗಿ ಮೃತ, ಲಾರಿ ನಿಲ್ಲಿಸದೆ ಪರಾರಿ

9:24 PM, Wednesday, July 7th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Ganesh Naikಬಂಟ್ವಾಳ : ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ಬುಧವಾರ ನಡೆದಿದೆ.

ಮಂಚಿ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಗಣೇಶ್ ನಾಯ್ಕ್ ಕಂಚಿಲ (54) ಮೃತಪಟ್ಟ ಬೈಕ್ ಸವಾರ.

ಗಣೇಶ್ ನಾಯ್ಕ್ ಅವರು ಕರ್ನಾಟಕ ಬ್ಯಾಂಕ್ ಮಂಗಳೂರು ಬ್ರಾಂಚ್ ನಲ್ಲಿ ಉದ್ಯೋಗಿಯಾಗಿದ್ದು, ಇಂದು ಬೆಳಗ್ಗೆ ಬ್ಯಾಂಕ್ ಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಣೇಶ್ ತೀವ್ರ ವಾಗಿ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English