ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದ ನೂತನ ಕೇಂದ್ರ ಸಚಿವರಿಗೆ ಅಭಿನಂದನೆ

11:41 PM, Wednesday, July 7th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

shobha ನೂತನ ಕೇಂದ್ರ ಸಚಿವರಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ

ಬೆಂಗಳೂರು ಜುಲೈ 07: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು.

ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್ ತಿಳಿಸಿದ್ದಾರೆ.

ಈ ನಾಲ್ವರು ನೂತನ ಸಚಿವರಿಗೆ ದೂರವಾಣಿ ಕರೆಯ ಮೂಲಕ ಸಚಿವ ಜಗದೀಶ್‌ ಶೆಟ್ಟರ್ ಅಭಿನಂದಿಸಿದರು.

cabinetನೂತನ ಕೇಂದ್ರ ಸಚಿವರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ

ಬೆಂಗಳೂರು ಜುಲೈ 07: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ನಾಲ್ವರು ಸಂಸದರಿಗೆ ಅರಣ್ಯ ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯದಿಂದ ಸಂಸತ್ ಸದಸ್ಯರಾಗಿರುವ ಕುಮಾರಿ. ಶೋಭ ಕರಂದ್ಲಾಜೆ, ಶ್ರೀ ಎ.ನಾರಾಯಣಸ್ವಾಮಿ, ಶ್ರೀ ಭಗವಂತ ಖೂಬಾ ಮತ್ತು ಶ್ರೀ ರಾಜೀವ್ ಚಂದ್ರಶೇಖರ್ ಅವರನ್ನು ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಾಶಸ್ತ್ಯ ನೀಡಿರುವುದು ಸಂತಸ ತಂದಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೂತನ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ನಾಲ್ವರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

ನೂತನ ಕೇಂದ್ರ ಸಚಿವರಿಗೆ ಶ್ರೀ ಗೋವಿಂದ ಕಾರಜೋಳ ಅವರಿಂದ ಅಭಿನಂದನೆ

ಬೆಂಗಳೂರು. ಜು.7: ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ಸಚಿವ ಸಂಪುಟದಲ್ಲಿ ನೂತನ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಭೂಪೇಂದ್ರ ಯಾದವ್, ಶ್ರೀ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಶ್ರೀ ರಾಜೀವ ಚಂದ್ರಶೇಖರ, ಶ್ರೀ ಭಗವಂತ ಖೂಬ, ಡಾ. ಎಲ್ .ಮುರುಗನ್ ಅವರಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅಭಿನಂದಿಸಿದ್ದಾರೆ.

ಆಡಳಿತದ ಅನುಭವ ಇರುವ, ದಕ್ಷತೆ, ಪಾರದರ್ಶಕತೆಯಿಂದ ಸಕ್ರಿಯವಾಗಿ, ಉತ್ಸಾಹದಿಂದ ಗುರುತರವಾಗಿ ಕಾರ್ಯನಿರ್ವಹಿಸುತ್ತಿರುವ ಇವರೆಲ್ಲರಿಗೂ ಕೇಂದ್ರ ಸಚಿವ ಸ್ಥಾನ ನೀಡಿರುವುದು ಸಂತೋಷದ ಸಂಗತಿಯಾಗಿದೆ. ಈ‌ ನೂತನ ಸಚಿವರು ರಾಷ್ಟ್ರದ‌ ಮತ್ತಷ್ಟು ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ಕರ್ನಾಟಕದ ಅಭಿವೃದ್ಧಿ ಗೆ ಮತ್ತಷ್ಟೂ ಸಹಕಾರಿಯಾಗಲಿದ್ದಾರೆ. ರಾಜ್ಯದ ಅಭಿವೃದ್ಧಿ, ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಪ್ರಸ್ತಾವನೆಗಳ ಮಂಜೂರಾತಿ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಅವರಿಗೆ ಮನವಿ ಮಾಡಿದ ಡಿಸಿಎಂ, ಈ ನೂತನ ಕೇಂದ್ರ ಸಚಿವರೆಲ್ಲರಿಗೂ ಶುಭಕೋರಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English