[1]ಬೆಂಗಳೂರು : ಕರ್ನಾಟಕ ಸರ್ಕಾರದ ಪರವಾಗಿ ಕಂದಾಯ ಸಚಿವ ಶ್ರೀ ಆರ್ ಅಶೋಕ ಅವರು ಶನಿವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಶ್ರೀ ಗೆಹ್ಲೋಟ್ ಒಬ್ಬ ಅನುಭವಿ ರಾಜಕಾರಣಿ ಮತ್ತು ಈ ಹಿಂದೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬಡ ಜನರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದು, ರಾಜ್ಯದ ಕುರಿತಂತೆ ಮಾಹಿತಿ ಉಳ್ಳವರಾಗಿದ್ದಾರೆ. ಆದ್ದರಿಂದ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ಮಾಡುವುದು ಸ್ವಾಗತಾರ್ಹ ಕ್ರಮವಾಗಿದೆ. ಆಡಳಿತಕ್ಕೆ ಅವರ ಅನುಭವವನ್ನು ಬಳಸಿಕೊಳ್ಳುತ್ತೇವೆ. ಇಂದು ಕರ್ನಾಟಕ ರಾಜ್ಯದ ಪರವಾಗಿ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸ್ವಾಗತಿಸುತ್ತಿದ್ದೇನೆ” ಎಂದು ಹೇಳಿದರು.
ಶ್ರೀ ಗೆಹ್ಲೋಟ್ ಅವರು ಜುಲೈ 11 ರಂದು ರಾಜಭವನದ ಗ್ಲಾಸ್ ಹೌಸ್ನಲ್ಲಿ ಬೆಳಿಗ್ಗೆ 10-30 ಕ್ಕೆ ಕರ್ನಾಟಕದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.