ಭಾರಿ ಮಳೆ : ಕುಲಶೇಖರ ಬಳಿ ರೈಲ್ವೆ ಹಳಿಗೆ ಕುಸಿದು ಬಿದ್ದ ತಡೆಗೋಡೆ, ರೈಲುಗಳ ಸಂಚಾರ ಸ್ಥಗಿತ

2:09 PM, Friday, July 16th, 2021
Share
1 Star2 Stars3 Stars4 Stars5 Stars
(No Ratings Yet)
Loading...

Konkan-Railಮಂಗಳೂರು:  ನಗರದ ಕುಲಶೇಖರದಲ್ಲಿ ನಿರ್ಮಾಣ ಹಂತದ ರೈಲ್ವೆ ಸುರಂಗ ಮಾರ್ಗದ ಬಳಿ ತಡೆಗೋಡೆ ಕುಸಿದು ಹಳಿಗೆ ಬಿದ್ದು, ರೈಲು ಸಂಚಾರಕ್ಕೆ ಅಡಚಣೆಯಾಗಿದೆ.

ಭಾರಿ ಮಳೆಯಿಂದಾಗಿ  ಶುಕ್ರವಾರ ಮುಂಜಾನೆ ಘಟನೆ ಸಂಭವಿಸಿದ್ದು, ಕಾಂಕ್ರೀಟ್‌ನಿಂದ ನಿರ್ಮಿಸಲಾದ ತಡೆಗೋಡೆ ಸಹಿತ ಭಾರಿ ಪ್ರಮಾಣದ ಮಣ್ಣು ಜರಿದು ಹಳಿಯ ಮೇಲೆ ಬಿದ್ದಿದೆ. ಮಂಗಳೂರು ಜಂಕ್ಷನ್‌-ತೋಕೂರು ನಡುವಿನ ಕುಲಶೇಖರ ಬಳಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ಮಣ್ಣು ತೆರವು ಕಾರ್ಯ ಆರಂಭವಾಗಿದ್ದು, ಕೊಂಕಣ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.  ಹಳಿಯ ಮೇಲೆ ಬಿದ್ದ ಮಣ್ಣು ತೆರವುಗೊಳಿಸಿದರೂ, ಗುಡ್ಡದ ಬದಿ ಮತ್ತಷ್ಟು ಜರಿದು ಬೀಳುವ ಸಾಧ್ಯತೆಯಿದೆ. ಈ ಹಿಂದೆಯೂ ಎರಡು ಬಾರಿ ಇಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English