ಮುದ್ರಾಡಿ ಕಾಂಗ್ರೆಸ್ ಪ್ರಮುಖರು ಬಿಜೆಪಿ ಸೇರ್ಪಡೆ

9:11 PM, Friday, July 16th, 2021
Share
1 Star2 Stars3 Stars4 Stars5 Stars
(No Ratings Yet)
Loading...

Karkala ಕಾರ್ಕಳ : ಕಳೆದ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ  ವಿವಿಧ ಪಕ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸರದಿ ಮುಂದುವರಿದಿದ್ದು ಮುದ್ರಾಡಿ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ 4 ಬಾರಿ ಆಯ್ಕೆಯಾಗಿದ್ದ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶೋಧ ಶೆಟ್ಟಿ ರವರು ಶಾಸಕರ ಕಛೇರಿ ವಿಕಾಸದಲ್ಲಿ ಶಾಸಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಮುದ್ರಾಡಿಯಲ್ಲಿ ಕಾಂಗ್ರೆಸ್‌ನವರ ದಬ್ಬಾಳಿಕೆಯನ್ನು ವಿರೋದಿಸಿ ಮತ್ತು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತು, ಶಾಸಕರ ಕ್ಷೇತ್ರದ ಅಭಿವೃದ್ಧಿಯನ್ನು ಮೆಚ್ಚಿಕೊಂಡು ನಾವು ಬಿಜೆಪಿ ಸೇರುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಕ್ಷೇತ್ರಾಧ್ಯಕ್ಷರಾದ ಮಹಾವೀರ ಹೆಗ್ಡೆ ಹಾಗೂ ಶಾಸಕರಾದ ವಿ. ಸುನಿಲ್ ಕುಮಾರ್ ರವರು ಪಕ್ಷದ ಧ್ವಜ ನೀಡಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಹೆಗ್ಡೆ, ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ ಮೊದಲಾದ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English