ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಮುದ್ರಾಧಾರಣೆ

9:36 PM, Tuesday, July 20th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Mudra Dharaneಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಮುದ್ರಾಧಾರಣೆ ನಡೆಯಿತು. ಬೆಳಗ್ಗೆ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿ ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಪರ್ಯಾಯ ಮಠಾಧೀಶರು ರಾಜಾಂಗಣದಲ್ಲಿ ಭಕ್ತಾದಿಗಳಿಗೆ ಮುದ್ರಾಧಾರಣೆ ನಡೆಸಿದರು.

ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಭಕ್ತರಿಗೆ ತಮ್ಮ ಮಠದಲ್ಲಿ ಮುದ್ರಾಧಾರಣೆ ನಡೆಸಿದರು. ಪೇಜಾವರದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಗಳು ಮತ್ತು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿಗಳು, ಶಿರೂರು ಮಠದ ಶ್ರೀ ವೇದ ವರ್ಧನ ತೀರ್ಥ ಸ್ವಾಮೀಜಿ ಜೊತೆಯಾಗಿ ತಮ್ಮ ತಮ್ಮ ಮಠದಲ್ಲಿಯೇ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು.

Mudra Dharane

Mudra Dharane

Mudra Dharane

 

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English