ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳ ವಧೆ, ದಾಳಿ ನಡೆಸಿ ಜಾನುವಾರು ವಶ

4:41 PM, Wednesday, July 21st, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Kudroli Shelterಮಂಗಳೂರು: ಬಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ, ಎನಿಮಲ್ ವೆಲ್ಫೇರ್ ಬೋರ್ಡ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಗೆ ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿದ್ದಾರೆ.

ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಪಡಿಸಿ ಕಸಾಯಿಖಾನೆಯು ಮುಚ್ಚಿದ್ದರೂ ಕೂಡ ಬೇರೊಂದು ಕಟ್ಟಡದಲ್ಲಿ ಅಕ್ರಮವಾಗಿ ದನ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಜಾರಿಯಲ್ಲಿದ್ದರೂ ಕೂಡ ದ.ಕ ಜಿಲ್ಲೆಯಲ್ಲಿ ಜಾನುವಾರುಗಳ ಹತ್ಯೆ ಎಗ್ಗಿಲ್ಲದೆ ನಡೆಯುತ್ತಿರುವುದರ ಬಗ್ಗೆ  ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English