ನಗರದಲ್ಲಿ ಮಂಗಳಮುಖಿಯರ ಎರಡು ಗುಂಪುಗಳ ನಡುವೆ ಘರ್ಷಣೆ, ಪೊಲೀಸರಿಗೆ ದೂರು

11:51 PM, Wednesday, July 28th, 2021
Share
1 Star2 Stars3 Stars4 Stars5 Stars
(No Ratings Yet)
Loading...

Transgenderಮಂಗಳೂರು: ನಗರದಲ್ಲಿ ಮಂಗಳಮುಖಿಯರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಮೂಲದ ಮಂಗಳಮುಖಿಯರು ಮತ್ತು ಹೊರಜಿಲ್ಲೆಗಳಿಂದ ಮಂಗಳೂರಿಗೆ ಬಂದವರ ನಡುವೆ ಹೊಡೆದಾಟ ನಡೆದಿದೆ.

ಪಣಂಬೂರು ಠಾಣೆಯಲ್ಲಿ ಎರಡು ತಂಡಗಳಿಂದ ದೂರು, ಪ್ರತಿದೂರು ದಾಖಲಾಗಿದೆ.

ನಗರದ ಬೈಕಂಪಾಡಿಯ ರೈಲ್ವೆ ಗೇಟ್ ಸಮೀಪ ಎರಡು ಗುಂಪಿನ ನಡುವೆ ಘರ್ಷಣೆ ನಡೆದು ಒಂದು ಗುಂಪು ಪಣಂಬೂರು ಠಾಣೆಯಲ್ಲಿ ದೂರು ನೀಡಿತ್ತು. ಇದೀಗ ಮತ್ತೊಂದು ಗುಂಪಿನವರು ಸಹ ದೂರು ನೀಡಿದ್ದಾರೆ.

ಮಂಗಳೂರು ಮೂಲದ ಮಂಗಳಮುಖಿಯರು ಹೊರಜಿಲ್ಲೆಯಿಂದ ಬಂದಿರುವ ಮಂಗಳಮುಖಿಯರಿಗೆ ನಗರದಿಂದ ತೆರಳಬೇಕು ಎಂದು ಬೆದರಿಸಿದ್ದಾರೆ. ನಾವು ಇಲ್ಲೇ ಹುಟ್ಟಿ ಬೆಳೆದದ್ದು. ನಾವು ಇಲ್ಲಿ ಇರಬೇಕು. ನೀವು ಇಲ್ಲಿಂದ ವಾಪಸ್ ಹೋಗಬೇಕು. ನೀವಿರುವುದರಿಂದ ನಮಗೆ ಭಿಕ್ಷೆಯಲ್ಲಿ‌ ಬರುವ ಆದಾಯ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.

ಗಂಗಾವತಿ, ಕೊಪ್ಪಳ, ಬಳ್ಳಾರಿಯಿಂದ ಸುಮಾರು ವರ್ಷಗಳ ಹಿಂದೆ ಬಂದು ಜೀವನ ನಡೆಸುತ್ತಿರುವ ಮಂಗಳಮುಖಿಯರು ಮತ್ತು ಹೊರಜಿಲ್ಲೆಯಿಂದ ಬಂದಿರುವ ಮಂಗಳಮುಖಿಯರ ನಡುವೆ ಸಂಘರ್ಷ ಉಂಟಾಗಿದೆ. ಈ ಬಗ್ಗೆ ಇಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರಿಗೆ ಎರಡು ಗುಂಪಿನವರು ಮನವಿ ನೀಡಲು ಬಂದಿದ್ದರು. ಈ ಸಂದರ್ಭದಲ್ಲಿಯೂ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ಎರಡು ತಂಡಗಳ ಮನವಿಯನ್ನು ಪೊಲೀಸ್ ಕಮೀಷನರ್ ಶಶಿಕುಮಾರ್ ಸ್ವೀಕರಿಸಿದರು ದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಎರಡು ತಂಡಗಳು ನೀಡಿರುವ ದೂರಿನ ಬಗ್ಗೆ ಸತ್ಯಾಸತ್ಯಾತೆ ನೋಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English