ಸುರತ್ಕಲ್ ಬಳಿ ಬಸ್ ಕಾರ್ ಡಿಕ್ಕಿ ಮೇಯರ್ ಗೆ ಗಾಯ

3:54 PM, Saturday, December 29th, 2012
Share
1 Star2 Stars3 Stars4 Stars5 Stars
(No Ratings Yet)
Loading...

Mayor Gulzar Banu ಮಂಗಳೂರು : ಮಂಗಳೂರಿನಿಂದ ಸುರತ್ಕಲ್ ಕಡೆಗೆ ಅತಿ ವೇಗವಾಗಿ ಸಾಗುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ಮಹಾನಗರ ಪಾಲಿಕೆ ಗೆ ತೆರಳುತ್ತಿದ್ದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕಾರಿಗೆ ಶುಕ್ರವಾರ ಮಧ್ಯಾಹ್ನ ಡಿಕ್ಕಿ ಹೊಡೆದಿದ ಪರಿಣಾಮ ಮೇಯರ್ ಗಾಯಗೊಂಡಿರುವ ಘಟನೆ ನಡೆದಿದೆ.

ಮೇಯರ್ ಗುಲ್ಜಾರ್ ಬಾನು ರವರು ಮನೆಯಿಂದ ಮಹಾನಗರ ಪಾಲಿಕೆಗೆ ಕಾರಿನಲ್ಲಿ ತೆರಳುತ್ತಿದ್ದು, ಸುರತ್ಕಲ್ ಜಂಕ್ಷನ್ ನಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಪಡೆಯಲು ಕಾರು ಚಾಲಕ ರಸ್ತೆ ಬದಿ ಕಾರು ನಿಲ್ಲಿಸಿದ್ದ ವೇಳೆ ಮಂಗಳೂರು ಕಡೆಯಿಂದ ಅತಿ ವೇಗವಾಗಿ ಬಂದ ಸರಕಾರೀ ಬಸ್ ಮೇಯರ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೇಯರ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಅವರನ್ನು ಕೂಡಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೇಯರ್ ರವರ ಕಾರು ಚಾಲಕ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English