ಜಾಗ ಮಾರಿ ಸಾಲ ಮಾಡಿ 15 ಲಕ್ಷ ವರದಕ್ಷಿಣೆ ಕೊಟ್ಟರೂ, 10 ಲಕ್ಷದ ಕಾರು ಬೇಕು ಎಂದ ಪತಿಯ ವಿರುದ್ಧ ದೂರು

1:59 PM, Wednesday, August 4th, 2021
Share
1 Star2 Stars3 Stars4 Stars5 Stars
(No Ratings Yet)
Loading...

dowriCaseಮಂಗಳೂರು : ವರದಕ್ಷಿಣೆ ಕೊಟ್ಟದ್ದೇ ಅಲ್ಲದೆ ಕಾರು ಬೇಕು ಎಂದು ಪತಿ ಹಾಗೂ ಆತನ ಮನೆಯವರು ದೈಹಿಕ, ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾನು ದುಬೈನಲ್ಲಿ ಹೋಟೆಲ್ ನಡೆಸುತ್ತಿದ್ದೇನೆ ಎಂದು ನಂಬಿಸಿ  ಮದುವೆ ಮಾಡಿದ್ದರು. ಪತಿಯಾದ ತುಷಾರ್ ಬಿ. ಮಾಣೈ ಮತ್ತು ಆತನ ಮನೆಯವರು ವರದಕ್ಷಿಣೆಗಾಗಿ ಹಿಂಸೆ ನೀಡಿದ್ದು, ತುಷಾರ್ ಮದುವೆಯಾಗಿದ್ದು ಮದುವೆಯ ಎಲ್ಲಾ ಖರ್ಚುಗಳನ್ನು ವಧುವಿನ ಮನೆಯವರು ಬರೆಸಿದ್ದರು. ವರನ ಮನೆಯವರ ಬೇಡಿಕೆಯಂತೆ ಜಾಗ ಮಾರಿ ಸಾಲ ಮಾಡಿ 15 ಲಕ್ಷ ರೂ. ಗಳಿಗೂ ಅಧಿಕ ಹಣ ನೀಡಲಾಗಿತ್ತು. ಮದುವೆಯಾದ ಅನಂತರ ತುಷಾರ್ ಹಾಗೂ ಇತರರು ಸೇರಿ ಕಾರು ಖರೀದಿಸಲು 10 ಲಕ್ಷ ರೂ. ಹೆಚ್ಚುವರಿ ವರದಕ್ಷಿಣೆ ತರಬೇಕೆಂದು ಬಲವಂತ ಮಾಡಿ ಹಿಂಸೆ ನೀಡಿದ್ದಾರೆ.

ಇದಲ್ಲದೇ ಕಾರಿನ ಸಾಲದ ಜಾಮೀನಿಗೆ ಬಲವಂತವಾಗಿ ಸಹಿ ಪಡೆದುಕೊಂಡಿದ್ದಾರೆ ಮದ್ಯ ಸೇವಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English