ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟದ ಖಾತೆಗಳ ವಿವರ ಇಲ್ಲಿದೆ ನೋಡಿ

12:38 PM, Saturday, August 7th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Basavaraja Bommai ಬೆಂಗಳೂರು :   ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಆದರೆ ಮೊದಲ ಬಾರಿಗೆ ರಾಜ್ಯ ಸಂಪುಟದಲ್ಲಿ ಸ್ಥಾನ ಪಡೆದಿರುವ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ನೀಡಲಾಗಿದೆ.

ಸಚಿವ ಸಂಪುಟ ರಚನೆಯಾಗಿ ಎರಡು ದಿನದ ಬಳಿಕ ಇದೀಗ ಖಾತೆ ಹಂಚಿಕೆ ಯಶಸ್ವಿಯಾಗಿದೆ. ಹೈಕಮಾಂಡ್ನಿಂದ ಅಧಿಕೃತವಾಗಿ ಅನುಮೋದನೆಗೊಂಡ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಬಹಳ ತಲೆನೋವೆಂದು ಪರಿಗಣಿಸಲಾಗಿರುವ ಶಿಕ್ಷಣ ಖಾತೆಯನ್ನ ಬಿ ಸಿ ನಾಗೇಶ್ ಅವರಿಗೆ ನೀಡಲಾಗಿದೆ.

ಹಿರಿಯ ಸಚಿವ ಗೋವಿಂದ ಕಾರಜೋಳ ಅವರಿಗೆ ಬಹಳ ಪ್ರಮುಖವಾದ ಜಲಸಂಪನ್ಮೂಲ ಖಾತೆಯನ್ನ ವಹಿಸಲಾಗಿದೆ. ಕೆ ಎಸ್ ಈಶ್ವರಪ್ಪ ಅವರು ಈ ಖಾತೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ, ಮುಖ್ಯಮಂತ್ರಿಗಳು ಅಂತಿಮವಾಗಿ ಕಾರಜೋಳ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ. ಸಿಸಿ ಪಾಟೀಲ್ ಅವರಿಗೆ ಲೋಕೋಪಯೋಗಿ ಖಾತೆ ಕೊಡಲಾಗಿದೆ. ಇಲ್ಲಿ ವಲಸಿಗರಿಗೆ ಎಲ್ಲಾ ಪ್ರಮುಖ ಖಾತೆಗಳು ಹೋಗುವ ಬದಲು ಮೂಲ ಬಿಜೆಪಿಗರಿಗೂ ಕೆಲ ಪ್ರಮುಖ ಖಾತೆಗಳು ಸಿಗಲು ಕಾರಣವಾಗಿದ್ದು ಆರೆಸ್ಸೆಸ್ ಶಿಫಾರಸ್ಸಿನಿಂದ ಎಂದೆನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ ಡಿಪಿಎಆರ್, ಹಣಕಾಸು, ಗುಪ್ತಚರ, ಸಂಪುಟ ವ್ಯವಹಾರ, ಬೆಂಗಳೂರು ಅಭಿವೃದ್ಧಿ ಖಾತೆಗಳನ್ನ ಇರಿಸಿಕೊಂಡಿದ್ದಾರೆ. ಹಾಗೂ ಇನ್ನೂ ಹಂಚಿಕೆಯಾಗದೇ ಉಳಿದ ಇತರೆಲ್ಲಾ ಖಾತೆಗಳು ಸದ್ಯ ಸಿಎಂ ಬಳಿಯೇ ಇರಲಿವೆ.

ಬೊಮ್ಮಾಯಿ ಸಂಪುಟದ ಸಚಿವರಿಗೆ ಹಂಚಿಕೆಯಾದ ಖಾತೆಗಳು:

1) ಗೋವಿಂದ ಕಾರಜೋಳ: ಜಲಸಂಪನ್ಮೂಲ ಖಾತೆ

2) ಕೆಎಸ್ ಈಶ್ವರಪ್ಪ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ3) ಆರ್ ಅಶೋಕ್: ಕಂದಾಯ (ಮುಜರಾಯಿ ಇಲ್ಲ)

4) ಬಿ ಶ್ರೀರಾಮುಲು: ಸಾರಿಗೆ ಮತ್ತು ಎಸ್ಟಿ ಕಲ್ಯಾಣ

5) ವಿ ಸೋಮಣ್ಣ: ವಸತಿ, ಮೂಲಸೌಕರ್ಯ ಅಭಿವೃದ್ಧಿ

6) ಉಮೇಶ್ ಕತ್ತಿ: ಅರಣ್ಯ, ಆಹಾರ ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರ

7) ಎಸ್ ಅಂಗಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

8) ಜೆ ಸಿ ಮಾಧು ಸ್ವಾಮಿ: ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ

9) ಅರಗ ಜ್ಞಾನೇಂದ್ರ: ಗೃಹ ಖಾತೆ

10) ಡಾ. ಅಶ್ವಥ ನಾರಾಯಣ: ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ

11) ಸಿಸಿ ಪಾಟೀಲ್: ಲೋಕೋಪಯೋಗಿ

12) ಆನಂದ್ ಸಿಂಗ್: ಭೂವಿಜ್ಞಾನ ಮತ್ತು ಪರಿಸರ, ಪ್ರವಾಸೋದ್ಯಮ

13) ಕೋಟ ಶ್ರೀನಿವಾಸ ಪೂಜಾರಿ: ಸಾಮಾಜಿಕ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ

14) ಪ್ರಭು ಚೌಹಾಣ್: ಪಶು ಸಂಗೋಪನೆ

15) ಮುರುಗೇಶ್ ನಿರಾಣಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

16) ಶಿವರಾಮ್ ಹೆಬ್ಬಾರ್: ಕಾರ್ಮಿಕ ಸಚಿವ

17) ಎಸ್ ಟಿ ಸೋಮಶೇಖರ್: ಸಹಕಾರ

18) ಬಿ ಸಿ ಪಾಟೀಲ್: ಕೃಷಿ

19) ಬೈರತಿ ಬಸವರಾಜು: ನಗರ ಅಭಿವೃದ್ಧಿ

20) ಡಾ. ಕೆ ಸುಧಾಕರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ

21) ಕೆ ಗೋಪಾಲಯ್ಯ: ಅಬಕಾರಿ ಖಾತೆ

22) ಶಶಿಕಲಾ ಜೊಲ್ಲೆ: ಮುಜರಾಯಿ ಮತ್ತು ಹಜ್ ವಕ್ಫ್

23) ಎಂಟಿಬಿ ನಾಗರಾಜು: ಪೌರಾಡಳಿತ, ಸಣ್ಣ ಕೈಗಾರಿಕೆ, ಸಾರ್ವಜನಿಕ ವಲಯ ಕೈಗಾರಿಕೆ

24) ನಾರಾಯಣಗೌಡ: ರೇಷ್ಮೆ ಖಾತೆ, ಯುವಜನ ಕ್ರೀಡೆ

25) ಬಿ. ಸಿ. ನಾಗೇಶ್: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ

26) ವಿ ಸುನೀಲ್ ಕುಮಾರ್: ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ

27) ಹಾಲಪ್ಪ ಆಚಾರ್: ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕ ಸಬಲೀಕರಣ

28) ಶಂಕರ್ ಪಾಟೀಲ್ ಮುನೇನಕೊಪ್ಪ: ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಖಾತೆ

29) ಮುನಿರತ್ನ: ತೋಟಗಾರಿಕೆ ಮತ್ತು ಯೋಜನಾ ಖಾತೆ, ಸಾಂಖ್ಯಿಕ ಇಲಾಖೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English