ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 127ನೇ ಸ್ಥಾಪಕರ ದಿನಾಚರಣೆ

4:42 PM, Saturday, December 29th, 2012
Share
1 Star2 Stars3 Stars4 Stars5 Stars
(No Ratings Yet)
Loading...

Founders Day in Mangaloreಮಂಗಳೂರು : ಕಾಂಗ್ರೆಸ್ ಪಕ್ಷದ 127 ನೇ ಸ್ಥಾಪಕ ದಿನಾಚರಣೆಯನ್ನು ನಿನ್ನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಗುಲ್ಜಾರ್ ಬಾನು ದ್ವಜಾರೋಹಣವನ್ನು ನೆರವೇರಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಾಸಕ ರಮಾನಾಥ ರೈ ಸಮಾರಂಭವನ್ನುದ್ದೇಶಿಸಿ ಮಾತನಾಡುತ್ತಾ, ಭಾರತದ ಇತಿಹಾಸದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು, ಇನ್ನು ಮುಂದೆಯೂ ತನ್ನ ಜನಸ್ನೇಹಿ ಕಾರ್ಯಕ್ರಮಗಳನ್ನು ಮುಂದುವರೆಸಿ ದೇಶದ ಸೇವೆ ಮಾಡುವಲ್ಲಿ ಮುಂಚೂಣಿಯಲ್ಲಿರುವುದು ಎಂಬ ನಂಬಿಕೆ ನಮಗಿರುವುದಾಗಿ ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮೂಡಾದ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್, ನವೀನ್ ಭಂಡಾರಿ, ಫಾರೂಕ್ ಉಳ್ಳಾಲ, ಮಹಾನಗರ ಪಾಲಿಕೆ ಮಾಜಿ ಮೇಯರುಗಳಾದ ಅಶ್ರಫ್, ಶಶಿಧರ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English