- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತವರು ಮನೆಗೆ ಬಂದಿದ್ದ ತಾಯಿ ಮಗು ಕೆರೆಯಲ್ಲಿ ಮುಳುಗಿ ಸಾವು

Abhishek [1]ಸುಳ್ಯ: ತವರು ಮನೆಗೆ ಪೂಜೆಗೆ ಬಂದಿದ್ದ ತಾಯಿ ಮಗು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.

ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು‌ ನಾಲ್ಕು ವರ್ಷದ ಅಭಿಮನ್ಯು ಮೃತರು.

ತಾಯಿ ಮಗು  ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು ಎನ್ನಲಾಗಿದೆ. ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ. ಮಗು ಕೆರೆಗೆ ಬಿದ್ದದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜುಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.