[1]ಮಂಗಳೂರು : ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಕ್ರೀಡೆಗಳು ಅತ್ಯಗತ್ಯ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಭಾನುವಾರ ಕುಮಾರಸ್ವಾಮಿ ಲೇಔಟ್ನ ಕಾರ್ಮೆಲ್ ಶಾಲಾ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯುವಕರು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡಬೇಕು ಮತ್ತು ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.
ಬಿಎಚ್ಸಿಎಸ್ ಲೇಔಟ್ನಲ್ಲಿ ಅಳವಡಿಸಿದ ಸಿಸಿಟಿವಿಗಳನ್ನು ಉದ್ಘಾಟಿಸಿದ ಆರ್ ಅಶೋಕ್
ಕಂದಾಯ ಸಚಿವ ಆರ್ ಅಶೋಕ ಭಾನುವಾರ ಬಿಎಚ್ಸಿಎಸ್ ಬಡಾವಣೆಯಲ್ಲಿ ಅಳವಡಿಸಲಾದ ಸಿಸಿಟಿವಿಗಳನ್ನು ಉದ್ಘಾಟಿಸಿದರು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಭಾರತ್ ಹೌಸಿಂಗ್ ಸೊಸೈಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಂದು ಬೆಳಿಗ್ಗೆ ಆರ್ ಅಶೋಕ ‘ಭೀಮನ ಅಮಾವಾಸ್ಯೆ’ಯ ಪ್ರಯುಕ್ತ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ರಾಜ್ಯದ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.