- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಿಜಲಿಂಗಪ್ಪನವರ ಉತ್ತಮ ಆಡಳಿತ ಆದರ್ಶಪ್ರಾಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Nijalingappa [1]ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ಅವರು ನೀಡಿದ ಉತ್ತಮ ಆಡಳಿತ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ. ಎಸ್.ಬೊಮ್ಮಾಯಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಪುಣ್ಯಾತಿಥಿಯಂದು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಕಂಡಂತ ಧೀಮಂತ ನಾಯಕ ನಿಜಲಿಂಗಪ್ಪ ಅವರು ಕರ್ನಾಟಕದ ಏಕೀಕರಣದಲ್ಲಿ ಬಹಳ ದೊಡ್ಡ ಪಾತ್ರವನ್ನು ವಹಿಸಿದ್ದರು. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸೇತುವೆಯಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಕಾವೇರಿ, ಕೃಷ್ಣಾ ಮುಂತಾದ ಪ್ರಮುಖ ನೀರಾವರಿ ಯೋಜನೆಗಳ ಚಿಂತಕ ಹಾಗೂ ರೂವಾರಿಗಳಾಗಿದ್ದರು. ಅವರು ನೀಡಿದ ಶುದ್ಧ ಆಡಳಿತ ನಮ್ಮೆಲ್ಲರಿಗೂ ಮಾರ್ಗದರ್ಶಕ. ಅವರು ಪ್ರತಿನಿಧಿಸಿ ಅವಿರೋಧವಾಗಿ ಆಯ್ಕೆಯಾದ ಕ್ಷೇತ್ರ ಶಿಗ್ಗಾವಿ. ಅದೇ ಕ್ಷೇತ್ರವನ್ನು ಪ್ರತಿನಿಧಿಸಿ ನಾನು ಮುಖ್ಯ ಮಂತ್ರಿ ಯಾಗಿರುವುದು ನನ್ನ ಸೌಭಾಗ್ಯ ಎನಿಸುತ್ತೆ. ಉತ್ತಮ ಆಡಳಿತ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಎಲ್ಲರೊಂದಿಗೆ ಸ್ನೇಹ ದಿಂದಿದ್ದು, ರಾಷ್ಟ್ರ ಮಟ್ಟದಲ್ಲಿ ನಾಯಕರಾಗಿ ಬೆಳೆದವರು. ಅವರ ಆದರ್ಶಗಳ ಪಾಲನೆ ಮಾಡುವುದು ನಮ್ಮ ಸರ್ಕಾರದ ಆಶಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ:ಕೆ.ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.