- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ. ಜಿಲ್ಲಾ ಪಂಚಾಯತ್‍ನಲ್ಲಿ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಶೀಲನಾ ಸಭೆ

Bommai-Progress-Meeting [1]ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಗಸ್ಟ್ 12ರ ಗುರುವಾರ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಸುಧಾಕರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ, ಆರೋಗ್ಯ ಮತ್ತು ಕುಟಿಂಬ ಕಲ್ಯಾಣ ಇಲಾಖೆಯ ಆಯುಕ್ತರು, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದಾರೆ.

ಶಾಸಕರುಗಳಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು,
ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Bommai-Progress-Meeting1 [2]

Bommai-Progress-Meeting1 [3]

Bommai-Progress-Meeting2 [4]

Bommai-Progress-Meeting1 [5]