- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸ್ಕೂಟರ್ ಗೆ ಲಾರಿ ಡಿಕ್ಕಿ : ಕನ್ಯಾನ ಪರಕಜೆ ನಿವಾಸಿ ಸಾವು

Manju Belchada [1]ಬಂಟ್ವಾಳ : ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.

ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ.

ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ದ್ವಿಚಕ್ರ ವಾಹನ ದ ಮೂಲಕ ಸಂಚರಿಸುವ ವೇಳೆ ಬುಡೋಳಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಅವರು ಬೊಳ್ನಾಡು ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ಸಂಪೂರ್ಣ ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿದ್ದು,   ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ಗೆ ಕರೆತರಲಾಯಿತಾದರೂ ಫಲ ನೀಡಿಲ್ಲ. ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯ ರು ದೃಢಪಡಿಸಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್‌ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Manju Belchada [2]