- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Bommai-Udupi [1]ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ  ಪಲಿಮಾರು ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಶ್ವೇಶ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಸಚಿವರಾದ ಡಾ: ಕೆ.ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಉಡುಪಿಯಲ್ಲಿ ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷ್ಣನ ದರ್ಶನಕ್ಕಾಗಿ ಸಣ್ಣವನಿದ್ದಾಗ ಉಡುಪಿಗೆ ಆಗಮಿಸುತ್ತಿದ್ದೆ. ಆದರೆ, ಕಳೆದ ಬಾರಿ ಎಲ್ಲರು ಸೇರಿ ಉಡುಪಿ ಜಿಲ್ಲೆಯ ಉಸ್ತುವಾರಿ ನೀಡಿದರು. ಜಿಲ್ಲೆಯ ಜನ, ಶಾಸಕರು ಪ್ರೀತಿ ವಿಶ್ವಾಸ ತೋರಿಸಿದ್ದಾರೆ. ಉಡುಪಿಯಲ್ಲಿ ಕೆಲಸ ಮಾಡಲು ತುಂಬಾ ಖುಷಿಯಾಗುತ್ತದೆ.

ಉಡುಪಿಯ ಜನ ಹೃದಯ ವೈಷಾಲ್ಯತೆ ಇರುವ ಜನರಾಗಿದ್ದಾರೆ. ಜಿಲ್ಲೆಗೆ ಹಾಗೂ ಕಷ್ಟಕ್ಕೆ ಏನು ಬೇಕು ಎನ್ನುವುದನ್ನು ಮಾತ್ರ ಉಡುಪಿಯ ಜನರು ಕೇಳುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Bommai-Udupi [2]

Bommai-Udupi [3]

Bommai-Udupi [4]