- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ 12 ಜನರ ಬಂಧನ

animal hunt [1]ಮಂಗಳೂರು   : ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡ್ಯಡ್ಕ ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ12 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಾನ್‌ ಮನೆಜಸ್‌‌, ಶ್ರೀನಿವಾಸ್‌, ಗುರುಪ್ರಸಾದ್‌, ಜೋಯಲ್‌ ಅನಿಲ್‌ ಡಿಸೋಜಾ, ಅನಜಯ್‌‌, ಸನತ್‌, ಹರೀಶ್‌ ಪೂಜಾರಿ, ಮೋಹನ್‌ ಗೌಡ, ನೋಣಯ್ಯ, ವಿನಯ್‌‌ ಪೂಜಾರಿ, ರಮೇಶ್‌ ಹಾಗೂ ಗಣೇಶ್‌ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 4 ಗನ್, 1 ಗ್ಯಾಸ್ ಸಿಲಿಂಡರ್, 12 ಮೊಬೈಲ್ ಫೋನ್, 2ಮರದ ತುಂಡು, ಗ್ಯಾಸ್ ಬರ್ನರ್, ನೆಟ್, 2 ಓಮ್ನಿ ಕಾರ್ ಮತ್ತು ಇತರ ಸಲಕರಣೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.