[1]ಮಂಗಳೂರು : ಪುತ್ತೂರಿನ ಕಬಕದಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಎಸ್ಡಿಪಿಐ ಕಾರ್ಯಕರ್ತರು ಅಡ್ಡಿ ಪಡಿಸಿರುವುದು ದೇಶ ವಿರೋಧಿ ಕೃತ್ಯವಾಗಿದೆ. ವೀರ ಸಾವರ್ಕರ್ ಅವರಿಗೆ ಅಪಮಾನ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ಕುಮಾರ್ ಕಟೀಲ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಐಸಿಸ್ ಉಗ್ರರ ಜತೆ ಸಂಬಂಧ ಇರಿಸಿಕೊಂಡವರನ್ನು ಇತ್ತೀಚೆಗೆ ಉಳ್ಳಾಲದಲ್ಲಿ ಬಂಧಿಸಲಾಗಿದೆ. ಇದೀಗ ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಪ್ರಕರಣ ನಡೆದಿದೆ. ಕರಾವಳಿಯಲ್ಲಿ ಸಮಾಜ ಘಾತಕ ಶಕ್ತಿಗಳು ಬೇರೂರಲು ಪ್ರಯತ್ನ ನಡೆಸುತ್ತಿವೆ. ರಾಜಕೀಯ ಲಾಭಕ್ಕಾಗಿ ಕೆಲವರು ದೇಶ ವಿರೋಧಿಗಳ ಜತೆ ಕೈಜೋಡಿಸುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರ ಇದಕ್ಕೆ ಅವಕಾಶ ನೀಡುವುದಿಲ್ಲ ದೇಶ ವಿರೋಧಿಗಳನ್ನು ಹಾಗೂಅವರ ಬೆಂಬಲಿಗರನ್ನು ಸರ್ಕಾರ ಮಟ್ಟ ಹಾಕಲಿದೆ ಎಂದು ಅವರು ತಿಳಿಸಿದ್ದಾರೆ.