ಮಂಗಳೂರು : ದುಬೈಯಲ್ಲಿದ್ದ ಪತ್ನಿಗೆ ಉಗ್ರರ ನಂಟು, ಪತಿಯಿಂದ ಪೊಲೀಸರಿಗೆ ದೂರು

11:22 PM, Thursday, September 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

chidanandaಮಂಗಳೂರು : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ವ್ಯಕ್ತಿಯೊಬ್ಬರು ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಪೊಲೀಸರಿಗೆ ನೀಡಿದ ದೂರಿನಂತೆ  ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ  ಚಿದಾನಂದ ಎಂಬವರು  ತನ್ನ ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದ್ದು, ಸದ್ಯ ನಾಪತ್ತೆಯಾಗಿದ್ದಾಳೆ. ಈ ಹಿನ್ನೆಲೆ ದ.ಕ. ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಪತ್ನಿ‌ ರಾಜಿ ರಾಘವನ್ ಗೆ ಉಗ್ರ ಸಂಘಟನೆಯೊಂದಿಗೆ ನಂಟಿದೆ. ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾಳೆ. ಮಕ್ಕಳನ್ನು ತನ್ನೊಂದಿಗೆ ದುಬೈಗೆ ಕಳುಹಿಸುವಂತೆ ಪೀಡಿಸುತ್ತಿದ್ದಾಳೆ. ಇಬ್ಬರು ಮಕ್ಕಳನ್ನು ತನ್ನೊಂದಿಗೆ ಕಳುಹಿಸಿಕೊಡುವಂತೆ ಪತ್ನಿ ನಿತ್ಯ ತನ್ನನ್ನು ಪೀಡಿಸುತ್ತಿದ್ದಾಳೆ. ತಮ್ಮದೊಂದು ಉಗ್ರ ಸಂಘಟನೆಯಿದೆ, ಅದಕ್ಕೆ ಮಕ್ಕಳನ್ನು ಸೇರಿಸಬೇಕಿದೆ. ಕಳುಹಿಸದಿದ್ದಲ್ಲಿ‌ ಸಂಘಟನೆಯ ಮೂಲಕ ಶಿಕ್ಷೆ ಕೊಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಪತ್ನಿ ಮಕ್ಕಳನ್ನು ಕಳುಹಿಸುವಂತೆ ಲಕ್ಷ ದ್ವೀಪದಿಂದ ವ್ಯಕ್ತಿಯೊಬ್ಬ ಚಿದಾನಂದ‌ಗೆ ಕರೆ ಮಾಡಿದ್ದಾನೆ. ಇಲ್ಲದಿದ್ದಲ್ಲಿ ನಾವು ಬಂದು ಕರೆದೊಯ್ಯುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ. ನಿನಗೆ ಎಷ್ಟು ದುಡ್ಡು ಬೇಕು ಕೇರಳಕ್ಕೆ ಬಾ ಕೊಡುತ್ತೇವೆ ಎಂದಿದ್ದಾನೆ. ಈ ಎಲ್ಲಾ ವಿಚಾರಗಳಿಂದ ನೊಂದುಕೊಂಡಿರುವ ಚಿದಾನಂದ ಸದ್ಯ ಪೊಲೀಸ್ ಇಲಾಖೆಯ ಮೊರೆ ಹೋಗಿದ್ದು, ಪತ್ನಿಯಿಂದ ತೊಂದರೆಯಾಗಿದ್ದು, ನನಗೂ ನನ್ನ ಮಕ್ಕಳಿಗೂ ರಕ್ಷಣೆಬೇಕು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಚಿದಾನಂದ ಕೆ.ಆರ್. ಮನವಿ ಸಲ್ಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English