[1]ಬಂಟ್ವಾಳ : ಸೆ.2ರಂದು ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಭಾನುವಾರ ಬೆಳಗ್ಗೆ ಪತ್ತೆಯಾಗಿದ್ದಾರೆ.
ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು.
ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು.
ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದರು.