[1]ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.1.70ಕ್ಕೆ ಇಳಿಕೆಯಾಗಿದ್ದು, ಭಾನುವಾರ 183 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ, ಓರ್ವ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 221 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ 1,11,058 ಸೋಂಕಿತರ ಪೈಕಿ 1,07,357 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ಗೆ ಇಲ್ಲಿಯವರೆಗೆ 1,594 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2107 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿ ಭಾನುವಾರ 130 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1432ಕ್ಕೇರಿದೆ. 70 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಭಾನುವಾರ ಯಾರೂ ಸೋಂಕಿನಿಂದ ಮೃತಪಟ್ಟಿಲ್ಲ.
ಭಾನುವಾರ ಕೊರೋನ ಸೋಂಕು ದೃಢಪಟ್ಟ 130 ಮಂದಿಯಲ್ಲಿ 66 ಮಂದಿ ಪುರುಷರು ಹಾಗೂ 64 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 71 ಮಂದಿ ಉಡುಪಿ ತಾಲೂಕು, 24 ಮಂದಿ ಕುಂದಾಪುರ ಹಾಗೂ 33 ಮಂದಿ ಕಾರ್ಕಳ ತಾಲೂಕಿನವರು. ಇಬ್ಬರು ಹೊರಜಿಲ್ಲೆಯವರೂ ಇಲ್ಲಿ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 16 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 124 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಶನಿವಾರ 70 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 72,583ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 7018 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 74,472ಕ್ಕೇರಿದೆ. ಇಂದಿನವರೆಗೆ ಜಿಲ್ಲೆಯಲ್ಲಿ ಒಟ್ಟು 10,07,979 ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದೆ.