ಸಂಘನಿಕೇತನದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

12:34 PM, Friday, September 10th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Sangha niketana ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು . ಈ ಪ್ರಯುಕ್ತ ಶ್ರೀ ದೇವರ ಮ್ರಿತಿಕೆಯ ವಿಗ್ರಹವನ್ನು ಮೆರವಣಿಗೆಯಲ್ಲಿ ಗುರುವಾರ ದಂದು ತರಲಾಯಿತು . ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಯಿತು.

ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಲಿದೆ . ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆಯಲಿದ್ದು , ಮಹಾಮಾರಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಪ್ರಕಾರ ಎಲ್ಲ ರೀತಿಯಲ್ಲಿ ನಿಯಮ ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದ್ರೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ . ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ರಘುವೀರ್ ಕಾಮತ್ , ವಿನೋದ್ ಶೆಣೈ , ಜೀವನರಾಜ್ ಶೆಣೈ , ಸತೀಶ್ ಪ್ರಭು , ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sangha Nikethana

ಚಿತ್ರ : ಮಂಜು ನೀರೇಶ್ವಾಲ್ಯ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English