[1]ಮಂಗಳೂರು, : ಪಣಂಬೂರು ಸಮುದ್ರ ತೀರದಲ್ಲಿ ಸೆ.11 ರಂದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಭಾನುವಾರ ರಾತ್ರಿ ವೇಳೆ ಪತ್ತೆಯಾಗಿದೆ.
ನಾಪತ್ತೆಯಾಗಿದ್ದ ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬ ಮೀನುಗಾರನ ಮೃತದೇಹ ಪತ್ತೆಯಾಗಿದೆ.
ಸೆ. 11 ರಂದು ಗಿಲ್ ನೆಟ್ ಬೋಟ್ ಮೀನುಗಾರಿಕೆಗೆ ತೆರಳುತ್ತಿರುವಾಗ ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು.
ಬೋಟ್ ಮಾಲಕ ಅಝರ್ ಎಂಬವರು ಈ ಕುರಿತು ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದರು.