- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊಡ್ಯಮಲೆ ಗುಡ್ಡೆಯಲ್ಲಿ ಯುವಕನನ್ನು ಕಡಿದು ಕೊಲೆ ಮಾಡಿದ ಆರೋಪಿ ಪೊಲೀಸರಿಗೆ ಶರಣು

rafiq murder [1]ಬಂಟ್ವಾಳ : ಕಕ್ಯೆಪದವು ಕೊಡ್ಯಮಲೆ ಗುಡ್ಡೆಯಲ್ಲಿ ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ರಫೀಕ್ (26) ಎಂಬಾತ ಕೊಲೆಯಾದ ಯುವಕನಾಗಿದ್ದಾನೆ. ಕಕ್ಯೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಆರೋಪಿ ಸಿದ್ಧಿಕ್ ಪುಂಜಾಲಕಟ್ಟೆ ಠಾಣೆಗೆ ಹಾಜರಾಗಿ ಪೊಲೀಸರಿಗೆ ಶರಣಾಗಿದ್ದಾನೆ.

ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಪುಂಜಾಲಕಟ್ಟೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.